July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

ಉಪ್ಪಿನಂಗಡಿ:18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.

18 ವರ್ಷದ ಕಾಯುವಿಕೆಯ ನಂತರ ಐಪಿಎಲ್‌ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳು ಬರಮಾಡಿಕೊಂಡಾಗ, ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿ, 33 ಮಂದಿ ಗಾಯಗೊಂಡಿದ್ದರು.

ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿಯವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು.

ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.

ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ.

ವಿಷಯ ತಿಳಿದು ಅವರು ಬೆಂಗಳೂರುಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya
error: Content is protected !!