26.9 C
ಪುತ್ತೂರು, ಬೆಳ್ತಂಗಡಿ
June 7, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಜೂ.೫ರಂದು ಚಾಲನೆಯನ್ನು ನೀಡಲಾಯಿತು. ಸಭಾ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ. ಬಳೆಂಜ ಮಾತನಾಡಿ ಮನುಷ್ಯರು ಪರಿಸರವನ್ನು ಕಲುಷಿತ ಮಾಡಿ ಪರಿಸರ ಮಾಲಿನ್ಯವನ್ನು ಮಾಡುತ್ತಿದ್ದಾರೆ. ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಆಗ ನಮಗೆ ಸ್ವಚ್ಚ ನೀರು, ಗಾಳಿ, ಆಹಾರ ಸಿಗುತ್ತದೆ. ವಿದ್ಯಾವಂತರಾದ ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳಸಿ ಸಸ್ಯಶ್ಯಾಮಲೆಯಾಗಿ ಭಾರತಾಂಬೆಯು ಕಂಗೊಳಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಮಲ್‌ತೇಜು ರಜಪೂತ್, ಸ್ಥಳೀಯ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಪಾಲಕಿ ಶ್ರೀಮತಿ ಮಂಜುಳಾ, ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಸೀಮಾ ಎಸ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಶ್ರೀಜಾ ಸ್ವಾಗತಿಸಿ, ಶಿಕ್ಷಕಿ ಸುಮಾ ವಂದಿಸಿದರು.

Related posts

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya
error: Content is protected !!