26.9 C
ಪುತ್ತೂರು, ಬೆಳ್ತಂಗಡಿ
June 7, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ರೆ. ಫಾದರ್ ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಪರಿಸರವನ್ನು ನಾವು ಮೊದಲು ಪ್ರೀತಿಸಬೇಕು. ಪರಿಸರವಿದ್ದರೆ ಶುಚಿಯಾಗಿದ್ದರೆ ಮಾತ್ರ ನಮ್ಮ ಬದುಕು ಸುಂದರ. ನಮ್ಮ ಭವಿಷ್ಯದ ಏಳಿಗೆಗಾಗಿ ಮತ್ತು ನಮ್ಮ ಉಳಿವಿಗಾಗಿ ನಾವು ಪರಿಸರವನ್ನು ಪ್ರೀತಿಸಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಹಾಗೂ ಅರಬಿಕ್ ಶಿಕ್ಷಣದ ಮುಖ್ಯೋಪಾಧ್ಯಾಯ ಶರೀಫ್ ಸಖಾಫಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿ ಪ್ರಾಸ್ತಾವಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಮಹಮ್ಮದ್ ಶಮ್ಮಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಸಸಿಯನ್ನು ನೆಡುವುದರ ಮೂಲಕ ಅದರ ಪೋಷಣೆಯನ್ನು ಮಾಡುವರೇ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

Related posts

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!