25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ರೆ. ಫಾದರ್ ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಪರಿಸರವನ್ನು ನಾವು ಮೊದಲು ಪ್ರೀತಿಸಬೇಕು. ಪರಿಸರವಿದ್ದರೆ ಶುಚಿಯಾಗಿದ್ದರೆ ಮಾತ್ರ ನಮ್ಮ ಬದುಕು ಸುಂದರ. ನಮ್ಮ ಭವಿಷ್ಯದ ಏಳಿಗೆಗಾಗಿ ಮತ್ತು ನಮ್ಮ ಉಳಿವಿಗಾಗಿ ನಾವು ಪರಿಸರವನ್ನು ಪ್ರೀತಿಸಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಹಾಗೂ ಅರಬಿಕ್ ಶಿಕ್ಷಣದ ಮುಖ್ಯೋಪಾಧ್ಯಾಯ ಶರೀಫ್ ಸಖಾಫಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿ ಪ್ರಾಸ್ತಾವಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಮಹಮ್ಮದ್ ಶಮ್ಮಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಸಸಿಯನ್ನು ನೆಡುವುದರ ಮೂಲಕ ಅದರ ಪೋಷಣೆಯನ್ನು ಮಾಡುವರೇ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

Related posts

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya
error: Content is protected !!