26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!