ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.