July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!