23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya
error: Content is protected !!