25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಅವರನ್ನು ಗಡಿಪಾರು ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ಕುಂಜರ್ಪದಲ್ಲಿ ಜೂ.3ರಂದು ಸಂಜೆ ಖಂಡನಾ ಸಭೆ ನಡೆಸಲಾಯಿತು. ಮಹೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಯಿತು.

ತಿಮರೋಡಿಯವರು ಪ್ರಸ್ತುತ ಯಾವುದೇ ಕೋಮು ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅವರು ಸಾಮಾಜಿಕ ಹೋರಾಟದಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ. ಆದರೂ ಅವರನ್ನು ಗಡಿಪಾರು ಮಾಡಲು ಸಿದ್ಧತೆ ಮಾಡಲಾಗಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತಲ್ಲದೆ ಈ ಬಗ್ಗೆ ಸಾರ್ವಜನಿಕವಾಗಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕರೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರೂ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯಲ್ಲಿ ಸಕ್ರಿಯವಾಗಿರುವ ಉಜಿರೆ ಕುಂಜರ್ಪದ ಮನೋಜ್ ಕುಮಾರ್ ಸಹಿತ 36 ಮಂದಿಯನ್ನು ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!