March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

ನಾರಾವಿ: ಹೆರಿಗೆಯ ನಂತರ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡ ನಾರಾವಿಯ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂ.೪ರಂದು ವರದಿಯಾಗಿದೆ.

ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಎಂಬವರ ಪತ್ನಿ ಶ್ರೀಮತಿ ಮಧುರಾ (29ವ) ಮೃತಪಟ್ಟ ಮಹಿಳೆಯಾಗಿದ್ದಾರೆ. ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿ ಶ್ರೀಮತಿ ಮಧುರಾ ಅವರನ್ನು ಕಳೆದ ಆರು ವರ್ಷಗಳ ಹಿಂದೆ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರು ವಿವಾಹವಾಗಿದ್ದು, ಅವರಿಗೆ ಮೂರುವರೆ ವರ್ಷದ ಗಂಡು ಮಗುವಿದೆ. ಮಧುರಾ ಅವರು ಮತ್ತೆ ಗರ್ಭವತಿಯಾಗಿ ಸಂಪಾಜೆಯ ತಾಯಿ ಮನೆಗೆ ತೆರಳಿದ್ದರು. ಹೆರಿಗೆಗಾಗಿ ಜೂ.2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಜೂ.೩ರಂದು ಸಂಜೆ 6.45ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ರಾತ್ರಿ ೯ ಗಂಟೆಗೆ ತಾಯಿಗೆ ತೀವ್ರ ರಕ್ತಸ್ರಾವ ಉಂಟಾಗುತ್ತಿದೆ ಎಂದು ಅಲ್ಲಿಯ ವೈದ್ಯರು ತಿಳಿಸಿದ್ದಂತೆ, ಅಂಬ್ಯುಲೆನ್ಸ್‌ನಲ್ಲಿ ಮಧುರಾ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ರಾತ್ರಿ 11.30ಕ್ಕೆ ಕರೆತಂದು ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ 12.37ಕ್ಕೆ ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ.

ಮೃತದೇಹದ ಮರಣೋತ್ತರ ಪರೀಕ್ಷೆ: ಮಂಗಳೂರು ಆಸ್ಪತ್ರೆಯಲ್ಲಿ ಮಧುರಾ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು. ಮನೆಯವರು ಅಂಬ್ಯುಲೆನ್ಸ್‌ನಲ್ಲಿ ಶವವನ್ನು ನಾರಾವಿಯ ಪತಿಯ ಮನೆಗೆ ತಂದಿದ್ದರು. ಶವದ ಅಂತಿಮ ಸಂಸ್ಕಾರಕ್ಕೆ ತಯಾರಿಯನ್ನು ನಡೆಸಲಾಗಿತ್ತು. ಈ ನಡುವೆ ಮರಣೋತ್ತರ ಪರೀಕ್ಷೆ ನಡೆಸದೆ ಶವವನ್ನು ಮನೆಯವರಿಗೆ ಹಸ್ತಾಂತರಿಸಿದ ಬಗ್ಗೆ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಮತ್ತಿತ್ತರ ನಾಯಕರು ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಮೃತ ಮಧುರಾ ಅವರ ಕುಟುಂಬಸ್ಥರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿ, ಶವದ ಮರಣೋತ್ತರ ಪರೀಕ್ಷೆ ನಡೆಸದೆ ಮೃತ ದೇಹವನ್ನು ತುರ್ತಾಗಿ ಬಿಡುಗಡೆ ಮಾಡಲಾಗಿದೆ. ಮಧುರಾ ಅವರ ಸಾವಿಗೆ ವೈದ್ಯಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ, ಶವದ ಮರಣೋತ್ತರ ಪರೀಕ್ಷೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಮಗುವಿನ ಭವಿಷ್ಯಕ್ಕಾಗಿ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದರು.

ಈ ವಿಷಯವನ್ನು ತಿಳಿದ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ನಾರಾವಿಯ ಮನೆಗೆ ಬಂದು ಪರಿಶೀಲನೆ ನಡೆಸಿ ಮನೆಯವರ ಜೊತೆ ಮಾತುಕತೆ ನಡೆಸಿದ್ದರು. ಬಳಿಕ ಮೃತದೇಹವನ್ನು ಪುನಃ ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕೊಂಡೋಗಿ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ನಾರಾವಿಯ ಪತಿಯ ಮನೆಯ ಬಳಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

Related posts

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya
error: Content is protected !!