27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಹೋರಿಯನ್ನು ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಬರುತ್ತಿದ್ದ ಇಬ್ಬರು ಹಾಗೂ ಹೋರಿಯನ್ನು ಕೊಟ್ಟ ಒಬ್ಬ ಸೇರಿ ಮೂವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ: ಜೂ.4 ರಂದು ರಾತ್ರಿ ಉಜಿರೆ ಓಡಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಒಂದು ಹೋರಿಯ ಕೊರಳಿಗೆ ನೈಲಾನ್ ಹಗ್ಗವನ್ನು ಕಟ್ಟಿ ಹಿಂಸಾತ್ಮಕವಾಗಿ ಎಳೆದುಕೊಂಡು ಬರುತ್ತಿರುವುದನ್ನು ಗಮನಿಸಿದ ಬೆಳ್ತಂಗಡಿ ಠಾಣಾ . ಪಿ.ಎಸ್.‌ ಐ ಯಲ್ಲಪ್ಪ ಹೆಚ್‌ ಮಾದಾರ ಅವರು ಸದ್ರಿ ವ್ಯಕ್ತಿಗಳನ್ನು ವಿಚಾರಿಸಿದಾಗ ದೇವರಾಜ ಟಿ. ಹೆಚ್ ಮತ್ತು ತೇಜಸ್ ಎಂದು ತಿಳಿಸಿದ್ದರೆನ್ನಲಾಗಿದೆ. ಇವರಿಬ್ಬರಲ್ಲಿ ಹೋರಿಯನ್ನು ಕೊರಳಿಗೆ ನೈಲಾನ್ ಹಗ್ಗ ಕಟ್ಟೆ ಹಿಂಸಾತ್ಮಕವಾಗಿ ಎಳೆದು ಕೊಂಡು ಬರುತ್ತಿರುವ ಬಗ್ಗೆ ಮತ್ತು ನಿಗದಿತ ಪ್ರಾಧಿಕಾರಿಂದ ಪರವಾನಗಿ ಕೇಳಿದಾಗ , ಅಟೋ‌ ಚಾಲಕ ರಿಯಾಜ್‌ ಎಂಬವರು ಹೋರಿಯನ್ನು ಟಿ.ಬಿ. ಕ್ರಾಸ್‌ ಹತ್ತಿರ ಬಿಡಲು ಹೇಳಿರುತ್ತಾರೆ ಎಂದು ತಿಳಿಸಿದ್ದರು.

ನಿಗದಿತ ಪ್ರಾಧಿಕಾರದಿಂದ ಯಾವುದೇ ಪರವಾನಗಿ ಅಥವಾ ದಾಖಲಾತಿ ಪಡೆಯದೆ ಹೋರಿಯನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಮಾಂಸಕ್ಕಾಗಿ ಎಳೆದುಕೊಂಡು ಹೋಗಲು ಹೋರಿಯನ್ನು ಕೊಟ್ಟ ಆರೋಪಿ ರಿಯಾಝ್‌ , ಹಾಗೂ ಅಕ್ರಮವಾಗಿ ಮಾಂಸಕ್ಕಾಗಿ ಹಿಂಸಾತ್ಮಕವಾಗಿ ಎಳೆದುಕೊಂಡು ಸಾಗಾಟ ಮಾಡುತ್ತಿದ್ದ ಆರೋಪಿಗಳಾದ ದೇವರಾಜ ಟಿ. ಹೆಚ್‌ ಮತ್ತು ತೇಜಸ್‌ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 44/2025 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ:11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆ 1960ಯಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

Related posts

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!