22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

ಉಪ್ಪಿನಂಗಡಿ:18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.

18 ವರ್ಷದ ಕಾಯುವಿಕೆಯ ನಂತರ ಐಪಿಎಲ್‌ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳು ಬರಮಾಡಿಕೊಂಡಾಗ, ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿ, 33 ಮಂದಿ ಗಾಯಗೊಂಡಿದ್ದರು.

ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿಯವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು.

ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.

ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ.

ವಿಷಯ ತಿಳಿದು ಅವರು ಬೆಂಗಳೂರುಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Related posts

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!