ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ರಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು, ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.