ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಜೂ.೫ರಂದು ಚಾಲನೆಯನ್ನು ನೀಡಲಾಯಿತು. ಸಭಾ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ. ಬಳೆಂಜ ಮಾತನಾಡಿ ಮನುಷ್ಯರು ಪರಿಸರವನ್ನು ಕಲುಷಿತ ಮಾಡಿ ಪರಿಸರ ಮಾಲಿನ್ಯವನ್ನು ಮಾಡುತ್ತಿದ್ದಾರೆ. ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಆಗ ನಮಗೆ ಸ್ವಚ್ಚ ನೀರು, ಗಾಳಿ, ಆಹಾರ ಸಿಗುತ್ತದೆ. ವಿದ್ಯಾವಂತರಾದ ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳಸಿ ಸಸ್ಯಶ್ಯಾಮಲೆಯಾಗಿ ಭಾರತಾಂಬೆಯು ಕಂಗೊಳಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಮಲ್‌ತೇಜು ರಜಪೂತ್, ಸ್ಥಳೀಯ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಪಾಲಕಿ ಶ್ರೀಮತಿ ಮಂಜುಳಾ, ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಸೀಮಾ ಎಸ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಶ್ರೀಜಾ ಸ್ವಾಗತಿಸಿ, ಶಿಕ್ಷಕಿ ಸುಮಾ ವಂದಿಸಿದರು.

Related posts

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!