27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಜೂ.4ರಂದು ಕಡಬ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದು ಸಂಜೆ ಧಾರ್ಮಿಕ ಸಂಘಟನೆಗಳ ಪ್ರಮುಖರುಗಳು ಕಡಬ ಪೊಲೀಸ್ ಠಾಣೆಯ ಬಳಿ ರಸ್ತೆಯಲ್ಲಿ ನಿಂತು ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣವನ್ನು ಮಾಡಿರುವುದಲ್ಲದೇ, ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರಿಗೆ ಕೋಮುದ್ವೇಷ ಭಾವನೆ ಹುಟ್ಟುವಂತೆ ಮಾತನಾಡಿರುತ್ತಾರೆ.

ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿದೆ ಎಂದು ಕಡಬ ಪೊಲೀಸ್‌‌ ಠಾಣಾ ಅ.ಕ್ರ 42/2025 ಕಲಂ: 353(2)BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಠಾಣಾ ಎಸ್.ಐ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Related posts

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya
error: Content is protected !!