July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಜೂ.4ರಂದು ಕಡಬ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದು ಸಂಜೆ ಧಾರ್ಮಿಕ ಸಂಘಟನೆಗಳ ಪ್ರಮುಖರುಗಳು ಕಡಬ ಪೊಲೀಸ್ ಠಾಣೆಯ ಬಳಿ ರಸ್ತೆಯಲ್ಲಿ ನಿಂತು ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣವನ್ನು ಮಾಡಿರುವುದಲ್ಲದೇ, ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರಿಗೆ ಕೋಮುದ್ವೇಷ ಭಾವನೆ ಹುಟ್ಟುವಂತೆ ಮಾತನಾಡಿರುತ್ತಾರೆ.

ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿದೆ ಎಂದು ಕಡಬ ಪೊಲೀಸ್‌‌ ಠಾಣಾ ಅ.ಕ್ರ 42/2025 ಕಲಂ: 353(2)BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಠಾಣಾ ಎಸ್.ಐ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Related posts

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!