23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಜೂ.4ರಂದು ಕಡಬ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದು ಸಂಜೆ ಧಾರ್ಮಿಕ ಸಂಘಟನೆಗಳ ಪ್ರಮುಖರುಗಳು ಕಡಬ ಪೊಲೀಸ್ ಠಾಣೆಯ ಬಳಿ ರಸ್ತೆಯಲ್ಲಿ ನಿಂತು ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣವನ್ನು ಮಾಡಿರುವುದಲ್ಲದೇ, ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರಿಗೆ ಕೋಮುದ್ವೇಷ ಭಾವನೆ ಹುಟ್ಟುವಂತೆ ಮಾತನಾಡಿರುತ್ತಾರೆ.

ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿದೆ ಎಂದು ಕಡಬ ಪೊಲೀಸ್‌‌ ಠಾಣಾ ಅ.ಕ್ರ 42/2025 ಕಲಂ: 353(2)BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಠಾಣಾ ಎಸ್.ಐ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Related posts

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya
error: Content is protected !!