September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ರೆ. ಫಾದರ್ ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಪರಿಸರವನ್ನು ನಾವು ಮೊದಲು ಪ್ರೀತಿಸಬೇಕು. ಪರಿಸರವಿದ್ದರೆ ಶುಚಿಯಾಗಿದ್ದರೆ ಮಾತ್ರ ನಮ್ಮ ಬದುಕು ಸುಂದರ. ನಮ್ಮ ಭವಿಷ್ಯದ ಏಳಿಗೆಗಾಗಿ ಮತ್ತು ನಮ್ಮ ಉಳಿವಿಗಾಗಿ ನಾವು ಪರಿಸರವನ್ನು ಪ್ರೀತಿಸಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಹಾಗೂ ಅರಬಿಕ್ ಶಿಕ್ಷಣದ ಮುಖ್ಯೋಪಾಧ್ಯಾಯ ಶರೀಫ್ ಸಖಾಫಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿ ಪ್ರಾಸ್ತಾವಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಮಹಮ್ಮದ್ ಶಮ್ಮಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಸಸಿಯನ್ನು ನೆಡುವುದರ ಮೂಲಕ ಅದರ ಪೋಷಣೆಯನ್ನು ಮಾಡುವರೇ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

Related posts

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
error: Content is protected !!