27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya
error: Content is protected !!