July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!