38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು ಜೂ.3ರಂದು ಜಪ್ತುಪಡಿಸಲಾಗಿದೆ.

ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿರುತ್ತಾನೆ, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ.

ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆರೋಪಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.

Related posts

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
error: Content is protected !!