September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು ಜೂ.3ರಂದು ಜಪ್ತುಪಡಿಸಲಾಗಿದೆ.

ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿರುತ್ತಾನೆ, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ.

ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆರೋಪಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.

Related posts

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!