22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು ಜೂ.3ರಂದು ಜಪ್ತುಪಡಿಸಲಾಗಿದೆ.

ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿರುತ್ತಾನೆ, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ.

ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆರೋಪಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.

Related posts

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!