September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಅವರನ್ನು ಗಡಿಪಾರು ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ಕುಂಜರ್ಪದಲ್ಲಿ ಜೂ.3ರಂದು ಸಂಜೆ ಖಂಡನಾ ಸಭೆ ನಡೆಸಲಾಯಿತು. ಮಹೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಯಿತು.

ತಿಮರೋಡಿಯವರು ಪ್ರಸ್ತುತ ಯಾವುದೇ ಕೋಮು ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅವರು ಸಾಮಾಜಿಕ ಹೋರಾಟದಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ. ಆದರೂ ಅವರನ್ನು ಗಡಿಪಾರು ಮಾಡಲು ಸಿದ್ಧತೆ ಮಾಡಲಾಗಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತಲ್ಲದೆ ಈ ಬಗ್ಗೆ ಸಾರ್ವಜನಿಕವಾಗಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕರೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರೂ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯಲ್ಲಿ ಸಕ್ರಿಯವಾಗಿರುವ ಉಜಿರೆ ಕುಂಜರ್ಪದ ಮನೋಜ್ ಕುಮಾರ್ ಸಹಿತ 36 ಮಂದಿಯನ್ನು ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!