27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು.

ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ ಸಹನ, ಶೈಕ್ಷಣಿಕ ಸಂಯೋಜಕರಾದ ಕು.ನಿಶಾ, ಶ್ರೀಮತಿ ಶ್ರುತಿ, ಆಡಳಿತಧಿಕಾರಿ ಶಾಂತಿರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಹೆಗ್ಡೆಯವರು ಬದುಕಿನಲ್ಲಿ ಗಳುಸುವ ಬಹಳ ದೊಡ್ಡ ಸಂಪತ್ತು ಅಂದರೆ ವಿದ್ಯೆ. ಅಂಥ ವಿದ್ಯೆಯನ್ನು ಕಲಿಯಲು ಯೋಗ್ಯ ಶಾಲೆಯನ್ನು ಆರಿಸಿಕೊಂಡ ತಮಗೆ ಶುಭವಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಸುಜಾತ ವಿದ್ಯಾರ್ಥಿಗಳಿಗೆ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!