37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು.

ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ ಸಹನ, ಶೈಕ್ಷಣಿಕ ಸಂಯೋಜಕರಾದ ಕು.ನಿಶಾ, ಶ್ರೀಮತಿ ಶ್ರುತಿ, ಆಡಳಿತಧಿಕಾರಿ ಶಾಂತಿರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಹೆಗ್ಡೆಯವರು ಬದುಕಿನಲ್ಲಿ ಗಳುಸುವ ಬಹಳ ದೊಡ್ಡ ಸಂಪತ್ತು ಅಂದರೆ ವಿದ್ಯೆ. ಅಂಥ ವಿದ್ಯೆಯನ್ನು ಕಲಿಯಲು ಯೋಗ್ಯ ಶಾಲೆಯನ್ನು ಆರಿಸಿಕೊಂಡ ತಮಗೆ ಶುಭವಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಸುಜಾತ ವಿದ್ಯಾರ್ಥಿಗಳಿಗೆ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
error: Content is protected !!