25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು.

ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ ಸಹನ, ಶೈಕ್ಷಣಿಕ ಸಂಯೋಜಕರಾದ ಕು.ನಿಶಾ, ಶ್ರೀಮತಿ ಶ್ರುತಿ, ಆಡಳಿತಧಿಕಾರಿ ಶಾಂತಿರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಹೆಗ್ಡೆಯವರು ಬದುಕಿನಲ್ಲಿ ಗಳುಸುವ ಬಹಳ ದೊಡ್ಡ ಸಂಪತ್ತು ಅಂದರೆ ವಿದ್ಯೆ. ಅಂಥ ವಿದ್ಯೆಯನ್ನು ಕಲಿಯಲು ಯೋಗ್ಯ ಶಾಲೆಯನ್ನು ಆರಿಸಿಕೊಂಡ ತಮಗೆ ಶುಭವಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಸುಜಾತ ವಿದ್ಯಾರ್ಥಿಗಳಿಗೆ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya
error: Content is protected !!