September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು.

ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ ಸಹನ, ಶೈಕ್ಷಣಿಕ ಸಂಯೋಜಕರಾದ ಕು.ನಿಶಾ, ಶ್ರೀಮತಿ ಶ್ರುತಿ, ಆಡಳಿತಧಿಕಾರಿ ಶಾಂತಿರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಹೆಗ್ಡೆಯವರು ಬದುಕಿನಲ್ಲಿ ಗಳುಸುವ ಬಹಳ ದೊಡ್ಡ ಸಂಪತ್ತು ಅಂದರೆ ವಿದ್ಯೆ. ಅಂಥ ವಿದ್ಯೆಯನ್ನು ಕಲಿಯಲು ಯೋಗ್ಯ ಶಾಲೆಯನ್ನು ಆರಿಸಿಕೊಂಡ ತಮಗೆ ಶುಭವಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಸುಜಾತ ವಿದ್ಯಾರ್ಥಿಗಳಿಗೆ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya
error: Content is protected !!