22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.

ವಿದ್ಯಾರ್ಥಿಗಳಾದ ಅನ್ವಿಲ್ ಡೇಸ ಮತ್ತು ಮೆಲೀಶಾ ಡಿಸೋಜಾ ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳು ಹಾಡು, ನೃತ್ಯ ಮತ್ತು ಕಿರುನಾಟಕವನ್ನು ಅಭಿನಯಿಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟ ಹಲವು ಘೋಷಣೆಗಳನ್ನು ಕೂಗಿ ಪರಿಸರದ ಮಹತ್ವವನ್ನು ಬಿತ್ತರಿಸಲಾಯಿತು.

ಮುಖ್ಯ ಅತಿಥಿ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ| ಅಲೆಕ್ಸ್ ಐವನ್ ಸಿಕ್ವೇರಾ ಮಾತನಾಡಿ ನಾವು ಪರಿಸರವನ್ನು ಸಂರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಿ ವಿಶ್ವ ಪರಿಸರ ದಿನದ ಶುಭಾಶಯವನ್ನು ಕೋರಿದರು.

ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚೇತನಾ ಮಾತನಾಡಿ ನಾವು ಇವತ್ತು ಮಾಡುವ ಪರಿಸರ ದಿನ ಆಚರಣೆ ಒಂದು ದಿನದ ಆಚರಣೆ ಆಗಬಾರದು ಇದನ್ನು ನಾವು ನಮ್ಮ ಬದುಕಿನಲ್ಲಿ ಪಾಲಿಸಬೇಕೆಂದು ಹೇಳಿ ವಿಶ್ವ ಪರಿಸರ ದಿನದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೊ ಡೇಸ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರಿನ್ಸಿಯ ಕಾರ್ಲ್ ನಿರೂಪಿಸಿ, ವಿಶ್ಮಿತಾ ಪ್ರಭು ಸ್ವಾಗತಿಸಿ, ಪವನ್ ನಾಯಕ್ ವಂದಿಸಿದರು.

Related posts

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya
error: Content is protected !!