July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಹೋರಿಯನ್ನು ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಬರುತ್ತಿದ್ದ ಇಬ್ಬರು ಹಾಗೂ ಹೋರಿಯನ್ನು ಕೊಟ್ಟ ಒಬ್ಬ ಸೇರಿ ಮೂವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ: ಜೂ.4 ರಂದು ರಾತ್ರಿ ಉಜಿರೆ ಓಡಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಒಂದು ಹೋರಿಯ ಕೊರಳಿಗೆ ನೈಲಾನ್ ಹಗ್ಗವನ್ನು ಕಟ್ಟಿ ಹಿಂಸಾತ್ಮಕವಾಗಿ ಎಳೆದುಕೊಂಡು ಬರುತ್ತಿರುವುದನ್ನು ಗಮನಿಸಿದ ಬೆಳ್ತಂಗಡಿ ಠಾಣಾ . ಪಿ.ಎಸ್.‌ ಐ ಯಲ್ಲಪ್ಪ ಹೆಚ್‌ ಮಾದಾರ ಅವರು ಸದ್ರಿ ವ್ಯಕ್ತಿಗಳನ್ನು ವಿಚಾರಿಸಿದಾಗ ದೇವರಾಜ ಟಿ. ಹೆಚ್ ಮತ್ತು ತೇಜಸ್ ಎಂದು ತಿಳಿಸಿದ್ದರೆನ್ನಲಾಗಿದೆ. ಇವರಿಬ್ಬರಲ್ಲಿ ಹೋರಿಯನ್ನು ಕೊರಳಿಗೆ ನೈಲಾನ್ ಹಗ್ಗ ಕಟ್ಟೆ ಹಿಂಸಾತ್ಮಕವಾಗಿ ಎಳೆದು ಕೊಂಡು ಬರುತ್ತಿರುವ ಬಗ್ಗೆ ಮತ್ತು ನಿಗದಿತ ಪ್ರಾಧಿಕಾರಿಂದ ಪರವಾನಗಿ ಕೇಳಿದಾಗ , ಅಟೋ‌ ಚಾಲಕ ರಿಯಾಜ್‌ ಎಂಬವರು ಹೋರಿಯನ್ನು ಟಿ.ಬಿ. ಕ್ರಾಸ್‌ ಹತ್ತಿರ ಬಿಡಲು ಹೇಳಿರುತ್ತಾರೆ ಎಂದು ತಿಳಿಸಿದ್ದರು.

ನಿಗದಿತ ಪ್ರಾಧಿಕಾರದಿಂದ ಯಾವುದೇ ಪರವಾನಗಿ ಅಥವಾ ದಾಖಲಾತಿ ಪಡೆಯದೆ ಹೋರಿಯನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಮಾಂಸಕ್ಕಾಗಿ ಎಳೆದುಕೊಂಡು ಹೋಗಲು ಹೋರಿಯನ್ನು ಕೊಟ್ಟ ಆರೋಪಿ ರಿಯಾಝ್‌ , ಹಾಗೂ ಅಕ್ರಮವಾಗಿ ಮಾಂಸಕ್ಕಾಗಿ ಹಿಂಸಾತ್ಮಕವಾಗಿ ಎಳೆದುಕೊಂಡು ಸಾಗಾಟ ಮಾಡುತ್ತಿದ್ದ ಆರೋಪಿಗಳಾದ ದೇವರಾಜ ಟಿ. ಹೆಚ್‌ ಮತ್ತು ತೇಜಸ್‌ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 44/2025 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ:11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆ 1960ಯಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

Related posts

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!