23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

ಉಪ್ಪಿನಂಗಡಿ:18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.

18 ವರ್ಷದ ಕಾಯುವಿಕೆಯ ನಂತರ ಐಪಿಎಲ್‌ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳು ಬರಮಾಡಿಕೊಂಡಾಗ, ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿ, 33 ಮಂದಿ ಗಾಯಗೊಂಡಿದ್ದರು.

ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿಯವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು.

ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.

ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ.

ವಿಷಯ ತಿಳಿದು ಅವರು ಬೆಂಗಳೂರುಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Related posts

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya
error: Content is protected !!