ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಜೂ.೫ರಂದು ಚಾಲನೆಯನ್ನು ನೀಡಲಾಯಿತು. ಸಭಾ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ. ಬಳೆಂಜ ಮಾತನಾಡಿ ಮನುಷ್ಯರು ಪರಿಸರವನ್ನು ಕಲುಷಿತ ಮಾಡಿ ಪರಿಸರ ಮಾಲಿನ್ಯವನ್ನು ಮಾಡುತ್ತಿದ್ದಾರೆ. ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಆಗ ನಮಗೆ ಸ್ವಚ್ಚ ನೀರು, ಗಾಳಿ, ಆಹಾರ ಸಿಗುತ್ತದೆ. ವಿದ್ಯಾವಂತರಾದ ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳಸಿ ಸಸ್ಯಶ್ಯಾಮಲೆಯಾಗಿ ಭಾರತಾಂಬೆಯು ಕಂಗೊಳಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಮಲ್‌ತೇಜು ರಜಪೂತ್, ಸ್ಥಳೀಯ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಪಾಲಕಿ ಶ್ರೀಮತಿ ಮಂಜುಳಾ, ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಸೀಮಾ ಎಸ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಶ್ರೀಜಾ ಸ್ವಾಗತಿಸಿ, ಶಿಕ್ಷಕಿ ಸುಮಾ ವಂದಿಸಿದರು.

Related posts

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya
error: Content is protected !!