23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಜೂ.೫ರಂದು ಚಾಲನೆಯನ್ನು ನೀಡಲಾಯಿತು. ಸಭಾ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ. ಬಳೆಂಜ ಮಾತನಾಡಿ ಮನುಷ್ಯರು ಪರಿಸರವನ್ನು ಕಲುಷಿತ ಮಾಡಿ ಪರಿಸರ ಮಾಲಿನ್ಯವನ್ನು ಮಾಡುತ್ತಿದ್ದಾರೆ. ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಆಗ ನಮಗೆ ಸ್ವಚ್ಚ ನೀರು, ಗಾಳಿ, ಆಹಾರ ಸಿಗುತ್ತದೆ. ವಿದ್ಯಾವಂತರಾದ ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳಸಿ ಸಸ್ಯಶ್ಯಾಮಲೆಯಾಗಿ ಭಾರತಾಂಬೆಯು ಕಂಗೊಳಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಮಲ್‌ತೇಜು ರಜಪೂತ್, ಸ್ಥಳೀಯ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಪಾಲಕಿ ಶ್ರೀಮತಿ ಮಂಜುಳಾ, ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಸೀಮಾ ಎಸ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಶ್ರೀಜಾ ಸ್ವಾಗತಿಸಿ, ಶಿಕ್ಷಕಿ ಸುಮಾ ವಂದಿಸಿದರು.

Related posts

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya
error: Content is protected !!