July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಜೂ.4ರಂದು ಕಡಬ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದು ಸಂಜೆ ಧಾರ್ಮಿಕ ಸಂಘಟನೆಗಳ ಪ್ರಮುಖರುಗಳು ಕಡಬ ಪೊಲೀಸ್ ಠಾಣೆಯ ಬಳಿ ರಸ್ತೆಯಲ್ಲಿ ನಿಂತು ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣವನ್ನು ಮಾಡಿರುವುದಲ್ಲದೇ, ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರಿಗೆ ಕೋಮುದ್ವೇಷ ಭಾವನೆ ಹುಟ್ಟುವಂತೆ ಮಾತನಾಡಿರುತ್ತಾರೆ.

ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿದೆ ಎಂದು ಕಡಬ ಪೊಲೀಸ್‌‌ ಠಾಣಾ ಅ.ಕ್ರ 42/2025 ಕಲಂ: 353(2)BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಠಾಣಾ ಎಸ್.ಐ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Related posts

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya
error: Content is protected !!