September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಯುವವಾಹಿನಿ ವೇಣೂರು ಘಟಕದ “ಆಸರೆ” ಯೋಜನೆಯ ಸಹಾಯಹಸ್ತ ವಿತರಣೆ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!