25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು ಜೂ.3ರಂದು ಜಪ್ತುಪಡಿಸಲಾಗಿದೆ.

ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿರುತ್ತಾನೆ, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ.

ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆರೋಪಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.

Related posts

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya
error: Content is protected !!