September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು ಜೂ.3ರಂದು ಜಪ್ತುಪಡಿಸಲಾಗಿದೆ.

ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿರುತ್ತಾನೆ, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ.

ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆರೋಪಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.

Related posts

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya
error: Content is protected !!