September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಅವರನ್ನು ಗಡಿಪಾರು ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ಕುಂಜರ್ಪದಲ್ಲಿ ಜೂ.3ರಂದು ಸಂಜೆ ಖಂಡನಾ ಸಭೆ ನಡೆಸಲಾಯಿತು. ಮಹೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಯಿತು.

ತಿಮರೋಡಿಯವರು ಪ್ರಸ್ತುತ ಯಾವುದೇ ಕೋಮು ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅವರು ಸಾಮಾಜಿಕ ಹೋರಾಟದಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ. ಆದರೂ ಅವರನ್ನು ಗಡಿಪಾರು ಮಾಡಲು ಸಿದ್ಧತೆ ಮಾಡಲಾಗಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತಲ್ಲದೆ ಈ ಬಗ್ಗೆ ಸಾರ್ವಜನಿಕವಾಗಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕರೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರೂ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯಲ್ಲಿ ಸಕ್ರಿಯವಾಗಿರುವ ಉಜಿರೆ ಕುಂಜರ್ಪದ ಮನೋಜ್ ಕುಮಾರ್ ಸಹಿತ 36 ಮಂದಿಯನ್ನು ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya
error: Content is protected !!