25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು.

ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ ಸಹನ, ಶೈಕ್ಷಣಿಕ ಸಂಯೋಜಕರಾದ ಕು.ನಿಶಾ, ಶ್ರೀಮತಿ ಶ್ರುತಿ, ಆಡಳಿತಧಿಕಾರಿ ಶಾಂತಿರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಹೆಗ್ಡೆಯವರು ಬದುಕಿನಲ್ಲಿ ಗಳುಸುವ ಬಹಳ ದೊಡ್ಡ ಸಂಪತ್ತು ಅಂದರೆ ವಿದ್ಯೆ. ಅಂಥ ವಿದ್ಯೆಯನ್ನು ಕಲಿಯಲು ಯೋಗ್ಯ ಶಾಲೆಯನ್ನು ಆರಿಸಿಕೊಂಡ ತಮಗೆ ಶುಭವಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಸುಜಾತ ವಿದ್ಯಾರ್ಥಿಗಳಿಗೆ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!