September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು.

ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ ಸಹನ, ಶೈಕ್ಷಣಿಕ ಸಂಯೋಜಕರಾದ ಕು.ನಿಶಾ, ಶ್ರೀಮತಿ ಶ್ರುತಿ, ಆಡಳಿತಧಿಕಾರಿ ಶಾಂತಿರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಹೆಗ್ಡೆಯವರು ಬದುಕಿನಲ್ಲಿ ಗಳುಸುವ ಬಹಳ ದೊಡ್ಡ ಸಂಪತ್ತು ಅಂದರೆ ವಿದ್ಯೆ. ಅಂಥ ವಿದ್ಯೆಯನ್ನು ಕಲಿಯಲು ಯೋಗ್ಯ ಶಾಲೆಯನ್ನು ಆರಿಸಿಕೊಂಡ ತಮಗೆ ಶುಭವಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಸುಜಾತ ವಿದ್ಯಾರ್ಥಿಗಳಿಗೆ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya
error: Content is protected !!