July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.

ವಿದ್ಯಾರ್ಥಿಗಳಾದ ಅನ್ವಿಲ್ ಡೇಸ ಮತ್ತು ಮೆಲೀಶಾ ಡಿಸೋಜಾ ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳು ಹಾಡು, ನೃತ್ಯ ಮತ್ತು ಕಿರುನಾಟಕವನ್ನು ಅಭಿನಯಿಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟ ಹಲವು ಘೋಷಣೆಗಳನ್ನು ಕೂಗಿ ಪರಿಸರದ ಮಹತ್ವವನ್ನು ಬಿತ್ತರಿಸಲಾಯಿತು.

ಮುಖ್ಯ ಅತಿಥಿ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ| ಅಲೆಕ್ಸ್ ಐವನ್ ಸಿಕ್ವೇರಾ ಮಾತನಾಡಿ ನಾವು ಪರಿಸರವನ್ನು ಸಂರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಿ ವಿಶ್ವ ಪರಿಸರ ದಿನದ ಶುಭಾಶಯವನ್ನು ಕೋರಿದರು.

ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚೇತನಾ ಮಾತನಾಡಿ ನಾವು ಇವತ್ತು ಮಾಡುವ ಪರಿಸರ ದಿನ ಆಚರಣೆ ಒಂದು ದಿನದ ಆಚರಣೆ ಆಗಬಾರದು ಇದನ್ನು ನಾವು ನಮ್ಮ ಬದುಕಿನಲ್ಲಿ ಪಾಲಿಸಬೇಕೆಂದು ಹೇಳಿ ವಿಶ್ವ ಪರಿಸರ ದಿನದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೊ ಡೇಸ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರಿನ್ಸಿಯ ಕಾರ್ಲ್ ನಿರೂಪಿಸಿ, ವಿಶ್ಮಿತಾ ಪ್ರಭು ಸ್ವಾಗತಿಸಿ, ಪವನ್ ನಾಯಕ್ ವಂದಿಸಿದರು.

Related posts

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya
error: Content is protected !!