27 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಿ’ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಜೂ.5ರಂದು ನಡೆಯಿತು.

ಶಾಲಾಪೋಷಕ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರು ಗಿಡ ನೆಡುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಾಣಿಗಳಿಗೆ ಆಹಾರದ ಕೊರತೆಯಾದರೆ ಪ್ರಾಣಿಸಂಕುಲ ಅಳಿವಿನಂಚಿಗೆ ಸಾಗುತ್ತದೆ. ಭೂಮಿಗೆ ನಮ್ಮ ಅಗತ್ಯವಿಲ್ಲ ಆದರೆ ನಮಗೆ ಭೂಮಿಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ಲಾಸ್ಟಿಕ್ ರಹಿತ ಪರಿಸರ, ಸುಂದರ ಪರಿಸರ ನಮ್ಮಿಂದಲೇ ನಿರ್ಮಾಣವಾಗಲಿ’ ಎಂದರು.

ಪರಿಸರ ಸೌಂದರ್ಯ ಉಳಿಸಲು ಹಾಗೂ ಜೀವಿಗಳ ಉಳಿಯುವಿಕೆಗೆ ಹಣ್ಣಿನ ಗಿಡಗಳನ್ನು ಬೆಳೆಯುವುದು ಮಹತ್ವದ ಕಾರ್ಯ ಎಂದು ಅವರು ತಿಳಿಸಿದರಲ್ಲದೆ, ವಿದ್ಯಾರ್ಥಿಗಳಿಗೆ ಕಸಿಕಟ್ಟುವ ವಿಧಾನವನ್ನು ತಿಳಿಸಿಕೊಟ್ಟರು.

ವಿಶ್ವ ಪರಿಸರ ದಿನದ ಪ್ರಯುಕ್ತ ಪ್ರತಿಜ್ಞಾ ಸ್ವೀಕಾರ, ಪರಿಸರ ಹಾಡು, ನಾಟಕ, ನೃತ್ಯ, ಪ್ಲಾಸ್ಟಿಕ್ ಬದಲಿ ವಸ್ತುಗಳ ತಯಾರಿ-ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತೌಫೀರ ಅತಿಥಿ ಪರಿಚಯ ನೀಡಿದರು. ಸೃಜನಾ ಸ್ವಾಗತಿಸಿ, ಮನಸ್ವಿ ವಂದಿಸಿದರು. ಜ್ಞಾನ್ ಅನ್ವೇಷ್, ಸಚಿತ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!