May 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು: ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.೫ರಂದು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಪರಿಸರ ದಿನದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿವಿಧ ಗಿಡಗಳನ್ನು ನೀಡಿ, ಅದರ ಪರಿಚಯವನ್ನು ಮಾಡಿ ಉಪಯೋಗವನ್ನು ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಆಯಾ ಶಿಕ್ಷಕರೊಂದಿಗೆ, ಶಾಲಾ ಉದ್ಯಾನದಲ್ಲಿ, ಹೂವಿನ ಗಿಡ, ಔಷಧಿ ಗಿಡ ಹಾಗೂ ಹಣ್ಣಿನ ಗಿಡಗಳನ್ನು ಸೇರಿದಂತೆ ವಿವಿಧ ಮರಗಳನ್ನು ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.

ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮೀಸಲಾಗದೆ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕಾಳಜಿಯನ್ನು ವಹಿಸುವುದು ಮತ್ತು ಇತರರಲ್ಲಿಯೂ ಜಾಗೃತಿಯನ್ನು ಮೂಡಿಸುವ ಅಗತ್ಯತೆಯ ಬಗ್ಗೆ ಮನ ಮುಟ್ಟುವಂತೆ ತಿಳಿಸಲಾಯಿತು. “ಇರುವುದೊಂದೇ ಭೂಮಿ: ಇದರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲರೂ ಪರಿಸರ ದಿನದ ಮಹತ್ವವನ್ನು ತಿಳಿದುಕೊಂಡರು.

ಈ ಕಾರ್ಯಕ್ರಮದಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ವಿಜಯಾ ಕೆ, ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya
error: Content is protected !!