May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಬಳಂಜ: ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ ಜಂಟಿ ಆಶ್ರಯದಲ್ಲಿ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಜೂ.೮ರಂದು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಲಿದೆ.

ಸ್ವಾವಲಂಬಿ ಬದುಕು ಹಾಗೂ ಶೈಕ್ಷಣಿಕವಾಗಿ ಗಟ್ಟಿಕೊಂಡಾಗ ಬದುಕು ಸುಂದರವಾಗುತ್ತದೆ ಎಂಬ ಸದುದ್ದೇಶವನ್ನು ಇಟ್ಟುಕೊಂಡು, ಬ್ರಹ್ಮಶ್ರೀ ನಾರಾಯಾಣ ಗುರುಗಳ ತತ್ವ ಸಿದ್ದಾಂತ ವಿದ್ಯೆಯಿಂದ ಸ್ವತಂತ್ರರಾಗಿರಿ,ಸಂಘಟನೆಯಿಂದ ಬಲಯುತರಾಗಿರಿ ಎಂಬ ಮಾತಿನಂತೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಸುಮಾರು ನಾಲ್ಕೂವರೆ ದಶಕಗಳಿಂದ ಸಂಘದ ಧತ್ತಿನಿಧಿಯಿಂದ ಉಚಿತ ಪುಸ್ತಕ ವಿತರಣೆಯನ್ನು ಮಾಡುತ್ತ ಬರುತ್ತಿರುವುದು ಸಮಾಜಕ್ಕೆ ಪ್ರೇರಣೆಯಾಗಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ತಿಳಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya
error: Content is protected !!