ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪರಿಸರ ಸಂಘ ಮತ್ತು ಸ್ಕೌಟ್ಸ್ ಗೈಡ್ಸ್ನ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ಪರಿಸರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು.
ಸಹಶಿಕ್ಷಕಿ ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಪ್ಲಾಸ್ಟಿಕ್ನಿಂದ ಆಗುವ ದುಷ್ಪರಿಣಾಮಗಳನ್ನು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮಕ್ಕಳಿಗೆ ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ, ಪರಿಸರ ಸಂಘದ ಶಿಕ್ಷಕಿ ಶ್ರೀಮತಿ ಅಮೃತ ವಿ ಶೆಟ್ಟಿ , ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ, ಶ್ರೀಮತಿ ಶೀಭಾ, ಶ್ರೀಮತಿ ದೀಕ್ಷಾ, ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ, ಶ್ರೀಮತಿ ಜ್ಯೋತಿ ಕಾರ್ಯಕ್ರಮಕ್ಕೆ ಸಹಕರಿಸಿದರು.













