28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪರಿಸರ ಸಂಘ ಮತ್ತು ಸ್ಕೌಟ್ಸ್ ಗೈಡ್ಸ್‌ನ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ಪರಿಸರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು.

ಸಹಶಿಕ್ಷಕಿ ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮಗಳನ್ನು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮಕ್ಕಳಿಗೆ ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ, ಪರಿಸರ ಸಂಘದ ಶಿಕ್ಷಕಿ ಶ್ರೀಮತಿ ಅಮೃತ ವಿ ಶೆಟ್ಟಿ , ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ, ಶ್ರೀಮತಿ ಶೀಭಾ, ಶ್ರೀಮತಿ ದೀಕ್ಷಾ, ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ, ಶ್ರೀಮತಿ ಜ್ಯೋತಿ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya
error: Content is protected !!