23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಸಂಪೂರ್ಣ ಸಮವಸ್ತ್ರ ಧರಿಸಿಕೊಂಡು ಶಾಲೆಯ ಮುಂದೆ ಪರಿಸರ ಸಂರಕ್ಷಣೆಯ ಘೋಷಣೆಯನ್ನು ಕೂಗುತ್ತ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ಮಕ್ಕಳಿಗೆ ಪರಿಸರ ಗೀತೆಯನ್ನು ಹಾಡಿಸಲಾಯಿತು. ಶಾಲೆಯ ಆವರಣದಲ್ಲಿ ಇರುವಂತಹ ಹೂವಿನ ಗಿಡಗಳಿಗೆ ನೀರು ಗೊಬ್ಬರ ಹಾಕಿ ಸಲಹುವ ಸಂದೇಶ ನೀಡಿದರು. ಕೇವಲ ಗಿಡಗಳನ್ನು ನೆಟ್ಟರೆ ಸಾಲದು ಅದರಲ್ಲಿ ಇರುವ ಕಳೆಯನ್ನು ಕಿತ್ತು ಹೇಗೆ ಕಾಪಾಡಬೇಕು ಎಂದು ಕಬ್ ಮಾಸ್ಟರ್ ಅಮೃತ ವಿ ಶೆಟ್ಟಿ ಮಾಹಿತಿಯನ್ನು ನೀಡಿದರು.

ಫ್ಲಾಕ್ ಲಿಡರ್ ಸೌಮ್ಯ ಎಂ. ಸುಮಾರು ಹದಿನಾರು ಗಿಡಗಳನ್ನು ಕೊಠಡಿಯಲ್ಲಿ ಇಟ್ಟು ಹೆಸರು ಬರೆದು ನಂತರ ಮಕ್ಕಳು ಅದನ್ನು ವೀಕ್ಷಿಸಿ ನೆನಪಿನ ಶಕ್ತಿಯ ಸ್ಪರ್ಧೆಯನ್ನು ವ್ಯವಸ್ಥೆ ಮಾಡಿದರು. ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಬ್ ಮಾಸ್ಟರ್ ಹೇಮಾವತಿ ಜೈನ್ ಸಹಕರಿಸಿದರು.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya
error: Content is protected !!