25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಸಂಪೂರ್ಣ ಸಮವಸ್ತ್ರ ಧರಿಸಿಕೊಂಡು ಶಾಲೆಯ ಮುಂದೆ ಪರಿಸರ ಸಂರಕ್ಷಣೆಯ ಘೋಷಣೆಯನ್ನು ಕೂಗುತ್ತ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ಮಕ್ಕಳಿಗೆ ಪರಿಸರ ಗೀತೆಯನ್ನು ಹಾಡಿಸಲಾಯಿತು. ಶಾಲೆಯ ಆವರಣದಲ್ಲಿ ಇರುವಂತಹ ಹೂವಿನ ಗಿಡಗಳಿಗೆ ನೀರು ಗೊಬ್ಬರ ಹಾಕಿ ಸಲಹುವ ಸಂದೇಶ ನೀಡಿದರು. ಕೇವಲ ಗಿಡಗಳನ್ನು ನೆಟ್ಟರೆ ಸಾಲದು ಅದರಲ್ಲಿ ಇರುವ ಕಳೆಯನ್ನು ಕಿತ್ತು ಹೇಗೆ ಕಾಪಾಡಬೇಕು ಎಂದು ಕಬ್ ಮಾಸ್ಟರ್ ಅಮೃತ ವಿ ಶೆಟ್ಟಿ ಮಾಹಿತಿಯನ್ನು ನೀಡಿದರು.

ಫ್ಲಾಕ್ ಲಿಡರ್ ಸೌಮ್ಯ ಎಂ. ಸುಮಾರು ಹದಿನಾರು ಗಿಡಗಳನ್ನು ಕೊಠಡಿಯಲ್ಲಿ ಇಟ್ಟು ಹೆಸರು ಬರೆದು ನಂತರ ಮಕ್ಕಳು ಅದನ್ನು ವೀಕ್ಷಿಸಿ ನೆನಪಿನ ಶಕ್ತಿಯ ಸ್ಪರ್ಧೆಯನ್ನು ವ್ಯವಸ್ಥೆ ಮಾಡಿದರು. ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಬ್ ಮಾಸ್ಟರ್ ಹೇಮಾವತಿ ಜೈನ್ ಸಹಕರಿಸಿದರು.

Related posts

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಸಾಧನೆ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!