24 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು.

ಪುತ್ತೂರು ಐ.ಸಿ.ಏ.ಆರ್ ಗೇರು ಸಂಶೋಧನಾ ಕೇಂದ್ರ ಮುಖ್ಯಸ್ಥ ದಿನಕರ ಅಡಿಗ ಗೇರು ಸಂಶೋಧನಾ ಕೇಂದ್ರದಲ್ಲಿ ರೈತರಿಗೆ ಲಭ್ಯವಿರುವ ಇತ್ತೀಚಿನ ಕೊಯ್ಲು ಹಾಗೂ ಕೊಯ್ಲಿನೋತ್ತರ ತಂತ್ರಜ್ಞಾನಗಳ ಕುರಿತು ವಿವರಿಸಿದರು.

ವಿಜ್ಞಾನಿ ಡಾ. ಭಾಗ್ಯ ರೈತರಿಗೆ ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಗ ವಿಜ್ಞಾನಿ ಡಾ. ರಶ್ಮಿ ಅಡಿಕೆ, ತೆಂಗು ಸಹಿತ ಪ್ರಮುಖ ತೋಟಗಾರಿಕೆ ಬೆಳೆಗಳ ಮುಂಗಾರು ಹಂಗಾಮಿನ ಸಮಗ್ರ ನಿರ್ವಹಣೆಯ ಉಪನ್ಯಾಸ ನೀಡಿದರು.

ವಿಜ್ಞಾನಿ ಡಾ. ಹರೀಶ್ ಶೆಣೈ ಭತ್ತದ ತಳಿಗಳ ಬಗ್ಗೆ ವಿವರಿಸಿ ಬೀಜೋಪಚಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸುರಕ್ಷಿತ ಪೀಡನಾಶಕಗಳ ಬಳಕೆ ಕುರಿತು ತಿಳಿಸಿದರು.

ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಏ.ಡಿ. ಕೃಷಿ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಎಲೆ ಚುಕ್ಕಿ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಗಣೇಶ್, ಆತ್ಮ ಸಿಬ್ಬಂದಿಗಳಾದ ನವನೀತ, ಸಾಯಿನಾಥ, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಸಖಿಯರು ಮತ್ತು ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.

Related posts

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya
error: Content is protected !!