28 C
ಪುತ್ತೂರು, ಬೆಳ್ತಂಗಡಿ
August 5, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು.

ಪುತ್ತೂರು ಐ.ಸಿ.ಏ.ಆರ್ ಗೇರು ಸಂಶೋಧನಾ ಕೇಂದ್ರ ಮುಖ್ಯಸ್ಥ ದಿನಕರ ಅಡಿಗ ಗೇರು ಸಂಶೋಧನಾ ಕೇಂದ್ರದಲ್ಲಿ ರೈತರಿಗೆ ಲಭ್ಯವಿರುವ ಇತ್ತೀಚಿನ ಕೊಯ್ಲು ಹಾಗೂ ಕೊಯ್ಲಿನೋತ್ತರ ತಂತ್ರಜ್ಞಾನಗಳ ಕುರಿತು ವಿವರಿಸಿದರು.

ವಿಜ್ಞಾನಿ ಡಾ. ಭಾಗ್ಯ ರೈತರಿಗೆ ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಗ ವಿಜ್ಞಾನಿ ಡಾ. ರಶ್ಮಿ ಅಡಿಕೆ, ತೆಂಗು ಸಹಿತ ಪ್ರಮುಖ ತೋಟಗಾರಿಕೆ ಬೆಳೆಗಳ ಮುಂಗಾರು ಹಂಗಾಮಿನ ಸಮಗ್ರ ನಿರ್ವಹಣೆಯ ಉಪನ್ಯಾಸ ನೀಡಿದರು.

ವಿಜ್ಞಾನಿ ಡಾ. ಹರೀಶ್ ಶೆಣೈ ಭತ್ತದ ತಳಿಗಳ ಬಗ್ಗೆ ವಿವರಿಸಿ ಬೀಜೋಪಚಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸುರಕ್ಷಿತ ಪೀಡನಾಶಕಗಳ ಬಳಕೆ ಕುರಿತು ತಿಳಿಸಿದರು.

ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಏ.ಡಿ. ಕೃಷಿ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಎಲೆ ಚುಕ್ಕಿ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಗಣೇಶ್, ಆತ್ಮ ಸಿಬ್ಬಂದಿಗಳಾದ ನವನೀತ, ಸಾಯಿನಾಥ, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಸಖಿಯರು ಮತ್ತು ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.

Related posts

ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಾಖಲೆಯ ರೂ. 2.12 ಕೋಟಿ ನಿವ್ವಳ ಲಾಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya
error: Content is protected !!